ಇನ್ಮುಂದೆ ಪ್ರತಿ ತಿಂಗಳು ಒಂದೊಂದು ತಾಲೂಕಿನಲ್ಲಿ ಸಾವಯವ ಸಮಾವೇಶ, ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019

ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

https://www.facebook.com/liveshivamogga/videos/470280030342020/?t=10

ಶಿವಮೊಗ್ಗದ ಪಿಇಎಸ್ ಕಾಲೇಜು ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಸುಭಿಕ್ಷ ಸಾವಯವ ಕೃಷಿಕರ ಬಹುರಾಜ್ಯ ಸಹಕಾರ ಸಂಘದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರತಿ ತಿಂಗಳು ಒಂದು ತಾಲೂಕಿನಲ್ಲಿ ರೈತರನ್ನು ಉತ್ತೇಜಿಸಲು ಬಜೆಟ್ ಬಳಿಕ ರೈತ ಸಮಾವೇಶ ನಡೆಸಲಾಗುತ್ತದೆ ಎಂದರು.

ಪ್ರಧಾನಮಂತ್ರಿ ಅವರ ಆಶಯದಂತೆ 2022 ಒಳಗಾಗಿ ರೈತರು ತಮ್ಮ ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರಕಾರದ ಯೋಜನೆಗಳ ಸದುಪಯೋಗ ಪಡೆದು ಸುಧಾರಿತ ಕೃಷಿ ತಂತ್ರಜ್ಞಾನಗಳನ್ನು ಮತ್ತು ಕೃಷಿ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಪ್ರಸ್ತುತ 50ಸಾವಿರ ಸಾವಯವ ಕೃಷಿಕ ಕುಟುಂಬಗಳು ರಾಜ್ಯದಲ್ಲಿದ್ದು, ಇವರ ಸಂಖ್ಯೆ ಮುಂದಿನ ಒಂದು ವರ್ಷದಲ್ಲಿ 5ಲಕ್ಷ ತಲುಪಬೇಕು ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Savayava Samavesha in Shimoga. Chief Minister B S Yedyurappa, Deputy CM Lakshmana Savadhi and others participated in the programme

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment