ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಒಂದು ರೂಪಾಯಿ ನೀಡಬೇಕು ಎಂದು ಹಿಂದಿನ ಜಿಲ್ಲಾಧಿಕಾರಿ, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ಗೆ ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಪೊನ್ನುರಾಜ್ 2011ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಆಗಿದ್ದ ವೇಳೆ ಕಂದಾಯ ಇಲಾಖೆ ನಿವೃತ್ತ ನೌಕರ ವಿನೋಬನಗರದ ಕೆ.ಶಿವಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿ, ಒಂದು ರೂ. ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ್, 60 ದಿನಗಳಲ್ಲಿ ಕೆ.ಶಿವಪ್ಪ ಅವರಿಗೆ 1 ರೂ. ಪರಿಹಾರ ನೀಡುವಂತೆ ಜ.10ರಂದು ಆದೇಶಿಸಿದ್ದಾರೆ.
ಏನಿದು ಕೇಸ್? ಮಾನನಷ್ಟಕ್ಕೇನು ಕಾರಣ?
ಶಿವಪ್ಪ ನಿವೃತ್ತರಾಗಿದ್ದರೂ ಕಂದಾಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಾರ್ವಜನಿಕರ ವ್ಯವಹಾರಗಳಿಗೆ ತೊಂದರೆ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎ.ಎಂ.ಮಹದೇವಪ್ಪ ಅಂದಿನ ಡಿಸಿ ಪೊನ್ನುರಾಜ್ಗೆ ದೂರು ನೀಡಿದ್ದರು. ವಿಚಾರಣೆ ನಡೆಸದೆ, ವಿವರಣೆ ಕೇಳಿ ನೋಟಿಸ್ ಕೂಡ ನೀಡದೆ ಶಿವಪ್ಪಗೆ ಯಾವುದೇ ಇಲಾಖೆ ಕಚೇರಿಗೆ ಹೋಗಬಾರದು ಎಂದು ಡಿಸಿ ಸುತ್ತೋಲೆ ಹೊರಡಿಸಿದ್ದರು.
ಪೊನ್ನುರಾಜ್ ಹೊರಡಿಸಿದ್ದ ಸುತ್ತೋಲೆ ತನ್ನ ವ್ಯವಹಾರಿಕ ಬದುಕಿನ ಮೇಲೆ ದುಷ್ಪರಿಣಾಮ ಬೀರಿದ್ದು, 25 ಲಕ್ಷ ರೂ.ಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಶಿವಪ್ಪ, 1 ರೂ.ಗೆ ಸೀಮಿತಗೊಳಿಸಿ 2014ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
Shimoga JMFC court has ordered to pay One Rupee as relief fund over a Defamation Case. The Case was against Former Deputy Commissioner Ponnuraj.
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






