ಶಿವಮೊಗ್ಗ ದುರ್ಗಿಗುಡಿ ಸ್ಕೂಲ್’ನಲ್ಲಿ ಕುರುಬರ ಸಂಘದ ಎಲೆಕ್ಷನ್, ಮತದಾನ ಶಾಂತಿಯುತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕುರುಬರ ಸಂಘದ ರಾಜ್ಯ ನಿರ್ದೇಶಕರ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ.

ದುರ್ಗಿಗುಡಿ ಸರ್ಕಾರಿ ಶಾಲೆ ಆವರಣದಲ್ಲಿ 9 ಬೂತ್’ಗಳಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗ್ಗೆಯಿಂದಲು ಜಿಲ್ಲೆಯ ವಿವಿಧೆಡೆಯ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಶಿವಮೊಗ್ಗದಿಂದ ನಾಲ್ಕು ನಿರ್ದೇಶಕರ ಆಯ್ಕೆ ನಡೆಯಲಿದೆ. ಒಟ್ಟು ಇಬ್ಬರು ಮಹಿಳಾ ಸ್ಪರ್ಧಿಗಳು ಸೇರಿದಂತೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು ಆರು ಸಾವಿರ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಡಿ.22ರಂದೆ ಚುನಾವಣೆ ನಡೆಯಬೇಕಿತ್ತು. ಆದರೆ ಬ್ಯಾಲೆಟ್ ಪೇಪರ್ ಗೊಂದಲದಿಂದಾಗಿ ಚುನಾವಣೆ ಮುಂದೂಡಲ್ಪಟ್ಟಿತ್ತು. ಶಿವಮೊಗ್ಗದ ಬ್ಯಾಲೆಟ್ ಪೇಪರ್’ಗಳ ಜೊತೆಗೆ ಬೀದರ್ ಜಿಲ್ಲೆಯ ಬ್ಯಾಲೆಟ್ ಪೇಪರ್’ಗಳು ಮಿಕ್ಸ್ ಆಗಿದ್ದರಿಂದ ಗೊಂದಲ ಸೃಷ್ಟಿಯಾಗಿ, ಚುನಾವಣೆಯೇ ನಿಲ್ಲಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment