ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020
ಗಣರಾಜ್ಯೋತ್ಸವ ಪ್ರಯುಕ್ತ ಜ.25ರಂದು ಶಿವಮೊಗ್ಗ ರಂಗಾಯಣದಿಂದ ಪ್ಲಾಸ್ಟಿಕ್ನ ಅನಾಹುತ ವಿವರಿಸುವ ‘ಪ್ಲಾಸ್ಟಿ ಸಿಟಿ’ ಪಪಟ್ ಶೋ (ಸೂತ್ರಧಾರಿ ಗೊಂಬೆಯಾಟ) ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು.
ಅಂದು ಬೆಳಗ್ಗೆ 11ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಏರ್ಪಡಿಸಿದ್ದು ಸಂಜೆ 6.30ಕ್ಕೆ ಸಾರ್ವಜನಿಕರಿಗೆ ಪ್ರದರ್ಶನ ಏರ್ಪಡಿಸಿದ್ದು 20 ರೂ. ಶುಲ್ಕ ನಿಗದಿಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೆಗ್ಗೋಡಿನ ಶ್ರವಣ ನಿರ್ದೇಶನದ ಓಂದು ಗಂಟೆಯ ಪ್ಲಾಸ್ಟಿ ಸಿಟಿ ನಾಟಕ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಲಿದೆ. ಸೂತ್ರಧಾರಿ ಗೊಂಬೆಯಾಟದ ಮೂಲಕ ಇದನ್ನು ಪ್ರಸ್ತುತಪಡಿಸುತ್ತಿರುವುದು ವಿಶೇಷವಾಗಿದೆ ಎಂದರು. ಶಿವಮೊಗ್ಗ ರಂಗಾಯಣ ಮಕ್ಕಳ ರಂಗಭೂಮಿ ಚಟುವಟಿಕೆಗೆ ಹೆಚ್ಚು ಒತ್ತು ನೀಡಲಿದೆ. ಮಕ್ಕಳಿಗೆ ರಂಗ ತರಬೇತಿ ಶಿಬಿರ ಏರ್ಪಡಿಸುವ ಜತೆಗೆ ಶಿಕ್ಷಕರಿಗೂ 15 ದಿನಗಳ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಇದ್ದರು.
- ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್, ವಾಹನಗಳಿಗೆ ಪರ್ಯಾಯ ಮಾರ್ಗ, ಯಾವುದದು?
- ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
- ಶಿವಮೊಗ್ಗದಲ್ಲಿ ಪ್ರಜ್ವಲ್ ಪೆನ್ಡ್ರೈವ್ ಕೇಸ್ ವಿರುದ್ಧ ಅಕ್ರೋಶ, ಡಿಸಿ ಮೂಲಕ ಸಿಎಂಗೆ ಪತ್ರ
- ಶಿವಮೊಗ್ಗದಲ್ಲಿ ಪ್ರದೀಪ್ ಈಶ್ವರ್, ಕ್ಷೇತ್ರಕ್ಕೆ ರಾಘವೇಂದ್ರ ಕೊಡುಗೆ ಬಗ್ಗೆ ಸವಾಲು, ಅಣ್ಣಾಮಲೈಗೆ ಓಪನ್ ಚಾಲೆಂಜ್
- ಲೋಕಸಭೆ ಚುನಾವಣೆ ಮಧ್ಯೆ ಶಿವಮೊಗ್ಗದಲ್ಲಿ ಮತ್ತೊಂದು ಚುನಾವಣೆಗೆ ಸಿದ್ಧತೆ, ಮೇ 9ಕ್ಕೆ ಅಧಿಸೂಚನೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]