ಶಿವಮೊಗ್ಗದಲ್ಲಿ ಧರ್ಮಸ್ಥಳ ಸಂಘದ ನೂತನ ಕೇಂದ್ರ ಕಚೇರಿ ಉದ್ಘಾಟನೆ, ಎಲ್ಲಿದೆ ಗೊತ್ತಾ ನೂತನ ಕಚೇರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020

ಫಲವತ್ತಾದ ಭೂಮಿ ಇಲ್ಲದಿದ್ದರೆ ಎಷ್ಟೇ ಮಳೆ ಬಂದರೂ ಪ್ರಯೋಜನ ಆಗುವುದಿಲ್ಲ. ಹಾಗೆಯೇ ಪ್ರಜ್ಞಾವಂತ ಜನರು ಇಲ್ಲದಿದ್ದರೆ ಸರ್ಕಾರ ಯಾವುದೇ ಯೋಜನೆ ತಂದರು ಉಪಯೋಗ ಆಗುವುದಿಲ್ಲ ಅಂತಾ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಹೇಳಿದರು.

2019 readers copy new

ಶಿವಮೊಗ್ಗದ ವಿದ್ಯಾನಗರ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ಕೇಂದ್ರ ಕಚೇರಿ ಚೈತನ್ಯ ಸೌಧದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ ಅವರು, 50 ವರ್ಷದ ಹಿಂದೆ ಶಿವಮೊಗ್ಗ, ಭದ್ರಾವತಿ ಭಾಗದಲ್ಲಿ ಬಹಳ ಬಡತನವಿತ್ತು. ಇವತ್ತು ಎಲ್ಲವು ಪರಿವರ್ತನೆ ಆಗಿದೆ. ಜನರು ಪ್ರಜ್ಞಾವಂತರಾಗಿದ್ದಾರೆ ಎಂದರು.

ಬಾಂಗ್ಲಾದೇಶದದಲ್ಲಿ ಮೊಹಮ್ಮದ್ ಯೂನಿಸ್ ಅವರು ಸ್ವಸಹಾಯ ಸಂಘಗಳನ್ನು ಮಹಿಳೆಯರಿಗೆ ಮಾತ್ರ ಎಂದು ಸ್ಥಾಪಿಸಿದರು. ಯಾರೊಬ್ಬರು ಪುರುಷರ ಸ್ವಸಹಾಯ ಸಂಘ ಸ್ಥಾಪಿಸಿಲ್ಲ. ಪುರುಷರಿಗೆ ಸಾಲ ಕೊಟ್ಟರೆ ವಸೂಲಿ ಮಾಡುವುದು ಕಷ್ಟ, ಬೈಗುಳ ಕೇಳಬೇಕು ಎಂದು ಎಲ್ಲರು ಹಿಂದೇಟು ಹಾಕುತ್ತಾರೆ. ಆದರೆ ಧರ್ಮಸ್ಥಳ ಸಂಘದ ವತಿಯಿಂದ ಪುರುಷರಿಗು ಸಂಘ ಸ್ಥಾಪಿಸಲಾಗಿದೆ. ಉಳಿತಾಯವು ಚೆನ್ನಾಗಿ ಆಗುತ್ತಿದೆ ಎಂದು ಅವರು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯ ನಡುವೆಯೂ ನಮ್ಮ ಸಂಸ್ಕೃತಿ ಉಳಿಯಲು ಶ್ರೀಗಳೇ ಕಾರಣ. ಮಹಿಳೆಯರ ಸಶಕ್ತಿಕರಣಕ್ಕೆ ಧರ್ಮಸ್ಥಳದ ಕಾರ್ಯ ಮೆಚ್ಚುವಂತದ್ದು. ನಮ್ಮ ಸರ್ಕಾರ ಕೂಡ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

83831714 1037938129900940 5946116848167682048 n.png? nc cat=104& nc ohc=PwZsvijhVaMAX9gDZT9& nc ht=scontent.fblr11 1

ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸ್ವಸಹಾಯ ಸಂಘದ ವ್ಯವಸ್ಥೆ ಈ ಮೊದಲು ಕ್ರೈಸ್ತ ಮೆಷಿನರಿಗಳ ಕೈಯಲ್ಲಿತ್ತು. ಆವರೊಂದಷ್ಟು ಸಾಲ ಕೊಡುತ್ತಿದ್ದರಷ್ಟೇ. ಧರ್ಮಸ್ಥಳ ಸಂಘದವರು ಸ್ವ ಸಹಾಯ ಗುಂಪುಗಳನ್ನು ಪ್ರಾರಂಭಿಸಿದ ನಂತರ ಇದಕ್ಕೆ ದೈವತ್ವದ ಗುಣ ಬಂದಿದೆ ಎಂದರು.

84256842 1037938229900930 2640581009233412096 n.png? nc cat=106& nc ohc=vfT1pMO9K20AX 14JYv& nc ht=scontent.fblr11 1

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಗೀತಾ ಜಯಶೇಖರ್, ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಮಂಜುನಾಥ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

83009267 1037938429900910 5960540241700847616 n.png? nc cat=106& nc ohc=EgWYrRxbX1oAX e1fyY& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2020

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment