ಅವತ್ತು ಸಿದ್ದರಾಮಯ್ಯ ಹಿಂದೆ ಸರಿದಿದ್ದರು, ಇವತ್ತು ಯಡಿಯೂರಪ್ಪ ಆ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ, ರೈತ ಸಂಘದ ವಾರ್ನಿಂಗ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಸೆಕ್ಷನ್ 5ನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡುವುದನ್ನು ರಾಜ್ಯ ರೈತ ಸಂಘ ಪ್ರಬಲವಾಗಿ ವಿರೋಧಿಸುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ಈ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರ ಭೂಮಿಯನ್ನು ಗುತ್ತಿಗೆ ಪಡೆದು, ಅದೇ ಭೂಮಿಯನ್ನು ಆಧಾರವಾಗಿಟ್ಟುಕೊಂಡು, ಕೃಷಿ ಸಂಬಂಧಿತ ಸಾಲವನ್ನು ಪಡೆಯಲು ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ದೊಡ್ಡ ಭೂಮಾಲೀಕರನ್ನು ಸೃಷ್ಟಿ ಮಾಡುವುದು ಮತತು ಬಹುರಾಷ್ಟ್ರೀಯ ಕಂಪನಿಗೆ ಅವಕಾಶವಾಗುತ್ತದೆ ಎಂದು ಆರೋಪಿಸಿದರು.

ಗುತ್ತಿಗೆ ಒಡಂಬಡಿಕೆ ಸಮಸ್ಯೆಗಳಾದರೆ ಅದನ್ನು ಬಗೆಹರಿಸುವ ಜವಾಬ್ದಾರಿಯನ್ನು ತಹಶೀಲ್ದಾರ್’ಗಳಿಗೆ ನೀಡಲಾಗಿದೆ. ಇದರಿಂದ ವ್ಯಾಜ್ಯಗಳು ಹಲವಾರು ವರ್ಷ ತಗಾದೆಗೆ ಒಳಗಾಗಿ, ಭೂಮಿ ಪಾಳು ಬೀಳುತ್ತದೆ. ಉತ್ಪಾದನೆ ಕುಂಠಿತವಾಗಿ ಆಹಾರ ಉತ್ಪಾದನೆ ಕುಸಿತದಿಂದ, ರೈತರು ನ್ಯಾಯಾಲಯ ಖರ್ಚು ಭರಿಸಲಾಗದೆ ಸಾಮಾಜಿಕ ಅಸಮತೋಲನ ಮತ್ತು ಗ್ರಾಮೀಣ ಬದುಕು ಬಂಡವಾಳ ಶಾಹಿಗಳ ಕಪಿಮುಷ್ಠಿಗೆ ತೆರಳುತ್ತದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ  ಈ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದರು. ಆ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗಾಗಿ ನಿರ್ಧಾರದಿಂದ ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ಸರಿದಿತ್ತು. ಈಗ ಯಡಿಯೂರಪ್ಪ ಸರ್ಕಾರ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಕ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿದ್ದೇ ಆದಲ್ಲಿ, ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಯಶವಂತರಾವ್ ಘೋರ್ಪಡೆ, ಕೆ.ಸಿ. ಗಂಗಾಧರ, ಡಿ.ವಿ. ವೀರೇಶ, ಹಿರಿಯಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment