ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 3 ಫೆಬ್ರವರಿ 2020
ಪಾಲಿಕೆ ವಾರ್ಡ್ ನಂಬರ್ 27ರ ಮಿಳಘಟ್ಟ ಬುದ್ಧ ನಗರದಲ್ಲಿರುವ ಶೌಚಾಲಯ ನಿರ್ವಹಣೆಗೆ ಟೆಂಡರ್ ಕರೆಯುವುದನ್ನು ಕೈಬಿಡುವಂತೆ ಒತ್ತಾಯಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಸೇವಾ ಸಂಘದ ವತಿಯಿಂದ ಇಂದು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಯಿತು.

KSRTC ಬಸ್ ಸ್ಟಾಂಡ್ ಹಿಂಭಾಗದ ರಸ್ತೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಶೌಚಾಲಯ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ 5 ಸಾವಿರ ಕೂಲಿಕಾರ್ಮಿಕರು ಇದ್ದಾರೆ. ಇದರಲ್ಲಿ ಸುಮಾರು 500 ಮನೆಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲ. ಹೀಗಾಗಿ ಇವರೆಲ್ಲರು ಸಾರ್ವಜನಿಕ ಶೌಚಾಲಯವನ್ನು ಅವಲಂಬಿಸಿದ್ದಾರೆ.
ಇದೀಗ ಈ ಶೌಚಾಲಯಕ್ಕೆ ಮಹಾನಗರ ಪಾಲಿಕೆ ವತಿಯಿಂದ ಟೆಂಡರ್ ಕರೆದು ಆ ಮೂಲಕ ನಿರ್ವಹಣೆ ಮಾಡುವುದಾಗಿ ತಿಳಿದುಬಂದಿದೆ. ಒಂದು ವೇಳೆ ಶೌಚಾಲಯ ಬಳಕೆಗೆ ಹಣ ನಿಗದಿಪಡಿಸಿದರೆ, ಇಲ್ಲಿನ ಕಡುಬಡವರಿಗೆ ಹಣ ನೀಡಿ ಶೌಚಾಲಯ ಬಳಕೆ ಮಾಡುವುದು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ವೇಲು, ರಂಗನಾಥ್, ರಾಮರಾಜ್, ಶಿವ, ಮಾರಪ್ಪ ಮತ್ತಿತರರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





