ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಪ್ರಯಾಣಿಕರ ಪ್ರಾಣ ಉಳಿಸಿ ಕೊನೆಯುಸಿರೆಳೆದ ಡ್ರೈವರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020

ಬಸ್ ಚಾಲನೆ ಮಾಡುತ್ತಿದ್ದಾಗಲೇ ಖಾಸಗಿ ಬಸ್ ಚಾಲಕರೊಬ್ಬರಿಗೆ ಹೃದಯಾಘಾತವಾಗಿದೆ. ಆದರೆ ಈ ವೇಳೆಯಲ್ಲೂ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಮಾರ್ (32) ಹೃದಯಾಘಾತದಿಂದ ಮೃತರಾದ ಚಾಲಕ. ಖಾಸಗಿ ಬಸ್ ಶಿಕಾರಿಪುರದಿಂದ ಹೊನ್ನಾಳಿಗೆ ತೆರಳುತ್ತಿತ್ತು. ಕೆಂಗಟ್ಟೆ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಆ ಸಮಯದಲ್ಲೂ ಬಸಿನ ವೇಗ ತಗ್ಗಿಸಿದ ಕುಮಾರ್, ಎಡ ಭಾಗದ ಮರಕ್ಕೆ ಗುದ್ದಿಸಿ, ನಿಲ್ಲಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆದರೆ ಚಾಲಕ ಕುಮಾರ್ ಹೃದಯಾಘಾತದಿಂದ ಮೃತರಾಗಿದ್ದಾರೆ. ಹೃದಯಾಘಾತದ ಸಮಯದಲ್ಲೂ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚಾಲಕ ಕುಮಾರ್ ಅವರಿಗೆ ಬಸ್ ಚಾಲಕರು, ಮಾಲೀಕರ ಸಂಘ ಸಂತಾಪ ಸೂಚಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment