ಶಿವಮೊಗ್ಗ ಲೈವ್.ಕಾಂ | SHIMOGA | 13 ಫೆಬ್ರವರಿ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕೋರ್ಟ್ಗೆ ಅಲೆಯುವಂತೆ ಮಾಡಿದ್ದ ವಕೀಲ ವಿನೋದ್ ಅವರ ವಿರುದ್ದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಜ್ಯುವೆಲರಿ ಅಂಗಡಿಯೊಂದರಲ್ಲಿ 8-9 ತಿಂಗಳ ಹಿಂದೆ 3.69 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲಸ್ ಖರೀದಿಸಿದ್ದಾರೆ.
ಒಡವೆಯ ಬಾಬ್ತು 40 ಸಾವಿರ ರೂ. ಕೊಟ್ಟಿದ್ದು ಉಳಿದ ಮೊತ್ತವನ್ನು ಕೇಳಲು ಜ್ಯುವೆಲರಿ ಅಂಗಡಿಯ ಮಾಲೀಕನ ಪತ್ನಿ ತನ್ನ ಮಗನೊಂದಿಗೆ ವಿನೋದ್ ಅವರ ಮನೆಗೆ ಹೋದಾಗ ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಐಪಿಸಿ 504, 341, 354(ಎ), 354 (ಬಿ), 506, 34 ಅಡಿ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ವಿಡಿಯೋ ಬಹಿರಂಗ
ಈ ನಡುವೆ ದುರುದಾರ ಮಹಿಳೆ ಭೇಟಿ ನೀಡಿದ್ದ ಸಮಯದ ಸಿಸಿಟಿವಿ ವಿಡಿಯೋಗಳನ್ನು ವಕೀಲ ವಿನೋದ್ ಅವರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಮಹಿಳೆ ಮತ್ತು ಆಕೆಯ ಪುತ್ರ, ವಕೀಲ ವಿನೋದ್ ಅವರ ಮನೆಗೆ ಭೇಟಿ ನೀಡುವುದು, ಕಚೇರಿಯಲ್ಲಿ ಕೂರುವುದು ಮತ್ತು ಕೆಲ ನಿಮಿಷದ ಬಳಿಕ ಅಲ್ಲಿಂದ ಹಿಂತಿರುಗುವ ದೃಶ್ಯವಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






