ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI | 16 ಫೆಬ್ರವರಿ 2020

ಮದುವೆ ದಿಬ್ಬಣದ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲ ವಿಠಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಹನುಂತಾಪುರದ ಈರಪ್ಪ (45), ಆಶಾ (34), ಹೇಮಂತ್ (7) ಮೃತ ದುರ್ದೈವಿಗಳು. ಹೊಳೆಹೊನ್ನೂರು ಆಸ್ಪತ್ರೆಗೆ ತೆರಳುವಾಗ ದುರ್ಘಟನೆ ಸಂಭಿವಿಸಿದೆ.
ಜವರಾಯನಾದ ದಿಬ್ಬಣದ ಬಸ್
ಆರೋಗ್ಯ ತಪಾಸಣೆಗಾಗಿ ಗರ್ಭಿಣಿ ಪತ್ನಿಯನ್ನು ಈರಪ್ಪ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮೂಡಲ ವಿಠಲಾಪುರ ಗ್ರಾಮದ ಬಳಿ ಮದುವೆ ದಿಬ್ಬಣದ ಬಸ್ ಡಿಕ್ಕಿ ಹೊಡೆದಿದೆ. ಬಸ್ಸು ಶಿವಮೊಗ್ಗದಲ್ಲಿ ಮದುವೆ ಮುಗಿಸಿಕೊಂಡು ಗುಡುಮಘಟ್ಟಕ್ಕೆ ತೆರಳುತ್ತಿತ್ತು.
ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೊಳೆಹೊನ್ನುರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು















