ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಕೃಷಿ ಮಸೂದೆಗಳನ್ನು ವಿರೋಧಿಸಿದ ಸಂಸದರನ್ನು ಸಂಸತ್ನಿಂದ ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಅಮ್ ಆದ್ಮಿ ಪಾರ್ಟಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.
ರಾಜ್ಯಸಭೆಯಲ್ಲಿ ರೈತರಿಗೆ ಸಂಬಂಧಿಸಿದ ಕೃಷಿ ಮಸೂದೆಗಳನ್ನು ಅಸಂವಿಧಾನಿಕ ರೀತಿಯಲ್ಲಿ ಅಂಗೀಕರಿಸಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಅಮ್ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಸೇರಿ ೮ ಸದಸ್ಯರನ್ನು ಸಂಸತ್ ನಿಂದ ಒಂದು ವಾರ ಅಮಾನತುಗೊಳಿಸಿರುವುದು ಒಳ್ಳೆಯ ನಡೆಯಲ್ಲ. ಇದು ವಿರೋಧಿಗಳ ಬಾಯಿ ಮುಚ್ಚಿಸುವ ಸರ್ಕಾರದ ಸರ್ವಾಧಿಕಾರಿ ವರ್ತನೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ಅಮ್ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಹೆಚ್.ರವಿಕುಮಾರ್, ದಿನೇಶ್ ಕಾಂತ, ಸುರೇಶ್ ಬಿ.ಕೋಟೇಕರ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]