ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020
ನಮ್ಮಂಥ ಹರಿಯರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಒತ್ತಾಯವಿದೆ. ಹಾಗಂತ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿಲ್ಲ ಅಂತಾ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿಗಳು ಮತ್ತು ತಾವು ಜೊತೆ ಜೊತೆಗೆ ಬೆಳೆದವರು. ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದೇನೆ. ಆದರೆ ಮನವಿ ಪತ್ರ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸ್ಥಾನಕ್ಕಾಗಿ ಇನ್ನಷ್ಟು ಸಮಯ ಕಾಯುವಂತೆ ತಿಳಿಸಿದ್ದಾರೆ. ಕೆಲವು ಅನಿವಾರ್ಯ ಸ್ಥಿತಿಗಳಿವೆ. ಹತ್ತು ಶಾಸಕರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷವಿದೆ. ಅವರು ನಮಗೆ ಬೆಂಬಲ ನೀಡದೆ ಹೋಗಿದ್ದರೆ ಸರ್ಕಾರವೇ ರಚೆನ ಆಗುತ್ತಿರಲಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]