ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ನ ಎರಡು ದಿನದ ರಾಜ್ಯ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ಆರಂಭವಾಗಿದೆ. ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಯುತ್ತಿರುವ ಸಭೆಗೆ, ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ದೇಶದಲ್ಲಿ ಭಾಷೆ ಮತ್ತು ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಸಂಚುಗಳು ನಡೆಯುತ್ತಿವೆ. ಇದರ ವಿರುದ್ಧ ಯುವ ಸಮೂಹ ಜಾಗೃತವಾಗಿರಬೇಕು. 370ನೆ ವಿಧಿಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರವನ್ನು ಭಾರತದ ಭಾಗವಾಗಿಸಿದೆ. ಎಬಿವಿಪಿ ಸಂಘಟನೆ ಕೂಡ ಬಹು ವರ್ಷದಿಂದ ಇದಕ್ಕಾಗಿ ಹೋರಾಟ ನಡೆಸಿತ್ತು. ಲಾಲ್ ಚೌಕ್’ನಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗಿತ್ತು ಎಂದರು.
ಎಬಿವಿಪಿ ರಾಜ್ಯಾಧ್ಯಕ್ಷ ಡಾ.ಅಲ್ಲಮ ಪ್ರಭು, ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರುಳಾಪುರ, ರಾಷ್ಟ್ರೀಯ ಸಮಿತಿ ಸದಸ್ಯ ರಾಮಚಂದ್ರಶೆಟ್ಟಿ ಸೇರಿದಂತೆ ಪ್ರಮುಖರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]