ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರಾಜ್ಯಾದ್ಯಂತ 60ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಎರಡು ಮನೆಗಳ ಮೇಲೂ ದಾಳಿಯಾಗಿರುವ ಮಾಹಿತಿ ಲಭ್ಯವಾಗಿದೆ.
ಚಾಲುಕ್ಯ ನಗರ ಮತ್ತು ಗೋಪಾಳ ಬಡಾವಣೆಯಲ್ಲಿನ ಇರುವ ಎರಡು ಮನೆಗಳ ಮೇಲೆ ಎಸಿಬಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಎಸಿಬಿ ಅಧಿಕಾರಿಗಳು ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಗಿರಿಯ ತೋಟ, ಗದಗದಲ್ಲಿ ಬಾಡಿಗೆ ಮನೆಯಲ್ಲೂ ಪರಿಶೀಲನೆ ನಡೆಯುತ್ತಿದೆ.
8 ಎಸ್.ಪಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು, 300ಕ್ಕೂ ಹೆಚ್ಚು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿರುವುದಾಗಿ ಎಸಿಬಿ ತಿಳಿಸಿದೆ.