ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಶಿವಮೊಗ್ಗದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಎರಡು ಮನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸುತ್ತಿದ್ದ ಶೋಧ ಕಾರ್ಯ ಪೂರ್ಣಗೊಂಡಿದೆ. ಈತನಕ ಪತ್ತೆಯಾಗಿರುವ ಚಿನ್ನಾಭರಣ, ವಾಹನಗಳು, ಆಸ್ತಿ ಮತ್ತು ನಗದು ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
ಟಿ.ಎಸ್.ರುದ್ರೇಶಪ್ಪಗೆ ಸೇರಿದ 2 ಮನೆಗಳು, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನಗಳು ಪತ್ತೆಯಾಗಿವೆ.
ಶೋಧ ಕಾರ್ಯದ ವೇಳೆ 9 ಕೆ.ಜಿ. 400 ಗ್ರಾಂ ತೂಕದ ಚಿನ್ನದ ಬಿಸ್ಕೇಟ್ ಹಾಗೂ ಆಭರಣ, ಮೂರು ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಸಿಕ್ಕಿವೆ.
ಎರಡು ಕಾರುಗಳು, ಮೂರು ದ್ವಿಚಕ್ರ ವಾಹನಗಳು ಕೂಡ ಪತ್ತೆಯಾಗಿವೆ.
ಇನ್ನು, ಎಂಟು ಎಕರೆ ಕೃಷಿ ಭೂಮಿಯ ದಾಖಲೆಗಳು ಕೂಡ ಶೋಧ ಕಾರ್ಯದ ವೇಳೆ ಸಿಕ್ಕಿದೆ.
ಮನೆಗಳಲ್ಲಿ 15.94 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಇನ್ನು, ಮನೆಯಲ್ಲಿ ಸುಮಾರು 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.
ತನಿಖೆ ಮುಂದುವರೆದಿದ್ದು, ವಿಚಾರಣೆ ಮುಂದುವರೆದಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ.