ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022
70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭದ್ರಾವತಿಯ ಬಿಳಕಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ಅವರ ಮೇಲೆ ದಾಳಿ ನಡೆಸಲಾಗಿದೆ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.
ಜಮೀನು ಒಂದರ ಸಂಬಂಧ ಎನ್.ಒ.ಸಿ ನೀಡಲು ಕೇಶವಮೂರ್ತಿ, ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಐದು ಸಾವಿರ ರೂ. ಪಡೆದುಕೊಂಡಿದ್ದರು. ಇವತ್ತು 70 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಎಸಿಬಿ ಡಿವೈಎಸ್’ಪಿ ಲೋಕೇಶ್ ಮಾರ್ಗದರ್ಶನದಲ್ಲಿ, ಇನ್ಸ್’ಪೆಕ್ಟರ್ ವಸಂತ ಕುಮಾರ್, ಪಿಎಸ್ಐ ಇಮ್ರಾನ್ ಬೇಗ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.