ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020
ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ನಾಡ ಕಚೇರಿಯಲ್ಲಿ ಖಾತೆ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಗೆ ಈತ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ರಿಪ್ಪನ್ಪೇಟೆ ನಾಡ ಕಚೇರಿಯಲ್ಲಿ ಇವತ್ತು ಮಧ್ಯಾಹ್ನ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನನ್ನು ಬಂಧಿಸಲಾಗಿದೆ.
ರಾಘವೇಂದ್ರ, ಬಂಧನಕ್ಕೊಳಗಾದ ಗ್ರಾಮ ಲೆಕ್ಕಿಗ. ಜೋಸೆಫ್ ಚಾಕೋ ಎಂಬುವವರಿಂದ ರಾಘವೇಂದ್ರ ಲಂಚ ಪಡೆಯುತ್ತಿದ್ದ. ಈ ವೇಳೆ ಎಸಿಬಿ ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ ತಂಡ ದಾಳಿ ನಡೆಸಿ, ರಾಘವೇಂದ್ರನನ್ನು ಬಂಧಿಸಿದೆ.
ಎಸಿಬಿ ಇನ್ಸ್ಪೆಕ್ಟರ್ ಎನ್.ವೀರೇಂದ್ರ, ಸಿಬ್ಬಂದಿಗಳಾದ ವಸಂತ, ನಾಗರಾಜ, ಸುರೇಂದ್ರ, ರಘುನಾಯ್ಕ, ಯೋಗೇಶ್ವರಪ್ಪ, ಹರೀಶ್, ಶ್ರೀನಿವಾಸ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]