ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021
ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.
ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಹೇಗಾಯ್ತು ಆಪಘಾತ?
ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು ಅಫ್ಜಲ್ ಅವರು ಓಮ್ನಿ ಕಾರಿನಲ್ಲಿ ಭದ್ರಾವತಿಯಿಂದ ತರೀಕೆರೆ ಕಡೆಗೆ ತೆರಳುತ್ತಿದ್ದರು. ಬಾರಂದೂರು ಬಳಿ ಎದುರಿನಿಂದ ಬಂದ ಟಾಟಾ ಸುಮೋ ಕಾರು, ಓಮ್ನಿ ಕಾರಿಗೆ ಡಿಕ್ಕಿಯಾಗಿದೆ.
ಓಮ್ನಿ ಕಾರಿನ ಬಲ ಭಾಗಕ್ಕೆ ಗುದ್ದಿದ ಟಾಟಾ ಸುಮೋ ಕಾರು, ರಸ್ತೆಯಿಂದ ಪಕ್ಕಕ್ಕೆ ಹೋಗಿ ತಿರುಗಿ ನಿಂತಿದೆ. ಇತ್ತ ಓಮ್ನಿ ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ಮಂಜುನಾಥ್ ಗಂಭಿರ ಗಾಯಗೊಂಡು ಕಾರಿನಲ್ಲೇ ಸಿಲುಕಿ ಮೃತಪಟ್ಟಿದ್ದಾನೆ.
ಓಮ್ನಿ ಕಾರಿನಲ್ಲಿದ್ದ ಅಫ್ಜಲ್, ಟಾಟಾ ಸುಮೋ ಚಾಲಕ ಸುಬ್ರಹ್ಮಣ್ಯ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200