SHIVAMOGGA LIVE NEWS | SHIMOGA | 20 ಜುಲೈ 2022
ಚಲಿಸುತ್ತಿದ್ದ ಬೈಕ್’ಗೆ (BIKE) ಹಿಂಬದಿಯಿಂದ ಕಾರು (CAR) ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ನಂಜಪ್ಪ ಆಸ್ಪತ್ರೆಗೆ (NANJAPPA HOSPITAL) ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ರುದ್ರಮೂರ್ತಿ ಗಾಯಗೊಂಡಿರುವ ಬೈಕ್ ಸವಾರ. ಹೊಸಳ್ಳಿ ಫಸ್ಟ್ ಕ್ಯಾಂಪ್’ನಲ್ಲಿರುವ ಮನೆಗೆ ಬಂದಿದ್ದ ರುದ್ರಮೂರ್ತಿ, ಬೈಕ್’ನಲ್ಲಿ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಬೇಡರ ಹೊಸಳ್ಳಿ (BEDARA HOSALLI) ಗ್ರಾಮದ ಬಳಿ ರುದ್ರಮೂರ್ತಿ ಚಲಿಸುತ್ತಿದ್ದ ಬೈಕ್’ಗೆ ಓಮ್ನಿ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ರುದ್ರಮೂರ್ತಿ ಸೊಂಟಕ್ಕೆ ಪಟ್ಟು ಬಿದ್ದಿದ್ದು, ಆತನನ್ನು ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್’ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಓಮ್ನಿ ಕಾರು ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ (RURAL POLICE STATION) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಅಂತಾ ಬೆದರಿಸಿ, ಚಿಕನ್ ವ್ಯಾಪಾರಿ ತಲೆಗೆ ದೊಣ್ಣೆಯಿಂದ ಹೊಡೆದು ಪರಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.