ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 24 ಫೆಬ್ರವರಿ 2020
ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಪೊಲೀಸರೆ ಕಾರಣ ಎಂದು ಆರೋಪಿಸಿ ಲಕ್ಕವಳ್ಳಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಹೇಗಾಯ್ತು ಅಪಘಾತ?
ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ಹೈವೇಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ರಸ್ತೆಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಕ್ಕವಳ್ಳಿ ಕಡೆಯಿಂದ ಶಿವಮೊಗ್ಗದ ಕಡೆಗೆ ಹೆಲ್ಮೆಟ್ ಧರಿಸದೆ ಬೈಕ್’ನಲ್ಲಿ ಬರುತ್ತಿದ್ದ ಇಬ್ಬರು ಯುವಕರನ್ನು, ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಸವಾರರು ಗುದ್ದಿದ್ದಾರೆ.
ಮೃತ ಯುವಕರಿಬ್ಬರು ಶಿವಮೊಗ್ಗದ ನವುಲೆಯವರು ಎಂದು ಹೇಳಲಾಗುತ್ತಿದೆ. ಸದ್ಯ ಇವರನ್ನು ಮೋಹನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಲಕ್ಕವಳ್ಳಿ ಕಡೆಯಿಂದ ಶಿವಮೊಗ್ಗದ ಕಡೆಗೆ ಬೈಕ್’ನಲ್ಲಿ ಬರುತ್ತಿದ್ದ ಇಬ್ಬರು ಯುವಕರನ್ನು, ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಸವಾರರು ಗುದ್ದಿದ್ದಾರೆ.
ಮಾರಿಹಬ್ಬಕ್ಕೆ ಸಂಬಂಧಿಗಳನ್ನು ಕರೆಯಲು ಹೋಗಿದ್ದರು
ಶಿವಮೊಗ್ಗದ ಮಾರಿಹಬ್ಬಕ್ಕೆ ತರೀಕರೆ ತಾಲೂಕಿನಲ್ಲಿರುವ ತಮ್ಮ ಸಂಬಂಧಿಗಳನ್ನು ಅಹ್ವಾನಿಸಲು, ಮೋಹನ್ ಮತ್ತು ಕುಮಾರ್ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ರೊಚ್ಚಿಗೆದ್ದ ಸ್ಥಳೀಯರಿಂದ ಪ್ರತಭಟನೆ
ಅಪಘಾತಕ್ಕೆ ಪೊಲೀಸರೆ ನೇರ ಹೊಣೆ ಎಂದು ಆರೋಪಿಸಿ, ಸ್ಥಳೀಯರು ಬೀದಿಗಿಳಿದಿದ್ದಾರೆ. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಶಿವಮೊಗ್ಗ ತರೀಕರೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಬ್ದವಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.