ಶಿವಮೊಗ್ಗ ಲೈವ್.ಕಾಂ | RIPPONPETE NEWS | 29 ಸೆಪ್ಟೆಂಬರ್ 2021
ಹಿಂಬದಿಯಿಂದ ಬಂದು ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಿಪ್ಪನ್’ಪೇಟೆಯಲ್ಲಿ ಘಟನೆ ಸಂಭವಿಸಿದೆ.
ಅಬ್ದುಲ್ ರೆಹಮಾನ್ (59) ಮೃತ ದುರ್ದೈವಿ. ರಿಪ್ಪನ್’ಪೇಟೆಯ ಹೊಸನಗರ ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿತ್ತು.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಅಬ್ದುಲ್ ರೆಹಮಾನ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಮಾರ್ಗ ಮಧ್ಯೆ ಅಬ್ದುಲ್ ರೆಹಮಾನ್ ಅವರು ಕೊನೆಯುಸಿರೆಳೆದಿದ್ದಾರೆ.
ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200