ಕಾರು, ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.
ಕಾರು ಚಾಲಕ ನಾಗೇಂದ್ರ ಮೃತ ದುರ್ದೈವಿ. ಅವರು ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಮುದ್ದಿನಕೊಪ್ಪ ಗ್ರಾಮದ ಬಳಿಕ ಘಟನೆ ಸಂಭವಿಸಿದೆ.
ಲಾರಿ ಚಾಲಕ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಈ ವೇಳೆ ಲಾರಿ ಏಕಾಏಕಿ ಬಲಭಾಗಕ್ಕೆ ತಿರುಗಿಸಿದ್ದರಿಂದ ಕಾರಿಗೆ ಗುದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಗೇಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ನಾಗೇಂದ್ರ ಅವರು ಹೊನ್ನಾಳಿ ತಾಲೂಕಿನವರು ಎಂದು ತಿಳಿದು ಬಂದಿದೆ. ಕೆಲಸದ ನಿಮಿತ್ತ ಆಯನೂರಿಗೆ ತೆರಳಿದ್ದರು. ಶಿವಮೊಗ್ಗದಲ್ಲಿರುವ ಸಂಬಂಧಿಯೊಬ್ಬರ ಮನೆಗೆ ಮರಳುತ್ತಿದ್ದರು. ಆಗ ಅವಘಡ ಸಂಭವಿಸಿದೆ.