ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್ ರಸ್ತೆಯ ಸಿದ್ಧಾಪುರ ಗ್ರಾಮದ ಬಳಿ ಬೆಳಗ್ಗೆ ಕಾರು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿಯಾಗಿದೆ. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]