ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020
ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್ ಕುಮಾರ್ ಆಸ್ಪತ್ರೆಗೆ ಚೆಕಪ್ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಶಿವಮೊಗ್ಗ ಕಡೆಯಿಂದ ಹೊನ್ನಾಳಿಗೆ ಹೊರಟಿದ್ದ ಬಸ್ ಡಿಕ್ಕಿಯಾಗಿದ್ದು, ಬೈಕ್ನಲ್ಲಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅರುಣ್ಗೆ ಬಚಾವಾಗಿದ್ದಾರೆ. ಹೊನ್ನಾಳಿ ತಾಲೂಕು ಬೆನಕನಹಳ್ಳಿಯ ಅಂಜಲಿಯನ್ನು ಸೈದರಕಲ್ಲಹಳ್ಳಿಯ ಅರುಣ್ ಪ್ರೀತಿಸಿ ವಿವಾಹವಾಗಿದ್ದರು.
ಅಪಘಾತ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]