ಶಿವಮೊಗ್ಗ ಲೈವ್.ಕಾಂ | HOLEHONNURU NEWS | 26 ನವೆಂಬರ್ 2021
ಬೈಕ್’ಗೆ ಲಾರಿ ಡಿಕ್ಕಿಯಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅರಹತೊಳಲು ವಡ್ಡರಹಟ್ಟಿಯ ರಂಗಸ್ವಾಮಿ (18) ಮೃತ ದುರ್ದೈವಿ. ಜಾವಳ್ಳಿಯ ಜ್ಞಾನದೀಪ ಶಾಲೆ ಬಳಿ ಘಟನೆ ಸಂಭವಿಸಿದೆ.
ರಂಗಸ್ವಾಮಿ ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಗುಂಡಿಗಳೇ ಕಾರಣ
ಹೊಳೆಹೊನ್ನೂರು ರಸ್ತೆಯಲ್ಲಿ ಡಾಂಬಾರಿಗಿಂತಲೂ ಹೆಚ್ಚು ಗುಂಡಿಗಳೇ ಕಾಣಿಸುತ್ತವೆ. ಗುಂಡಿಗಳನ್ನು ತಪ್ಪಿಸಲು ವಾಹನ ಚಾಲಕರು ಹರಸಾಹಸ ಮಾಡಬೇಕಾಗಿದೆ. ಈ ವೇಳೆಯಲ್ಲೇ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿದೆ.