SHIVAMOGGA LIVE NEWS | 2 ಮಾರ್ಚ್ 2022
ಬೈಕ್’ನಲ್ಲಿ ತೆರಳುತ್ತಿದ್ದವರೆಗೆ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಲ್ಲುಕೊಪ್ಪ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಬೈಕ್ ಸವಾರರಾದ ಶಿವರಾಜ್ ಮತ್ತು ಮಹೇಂದ್ರ ಅವರು ಗಾಯಗೊಂಡಿದ್ದಾರೆ. ಸೊರಬದ ಬೆಲವಂತಕೊಪ್ಪದಿಂದ ತ್ಯಾಗರ್ತಿ ಮಾರ್ಗವಾಗಿ ಆನಂದಪುರದ ಕಡೆಗೆ ತರಳುತ್ತಿದ್ದಾಗ ಎದುರಿನಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ.
ಶಿವರಾಜ್ ಮತ್ತು ಮಹೇಂದ್ರ ಗಾಯಗೊಂಡಿದ್ದು, ಸ್ಥಳೀಯರು, ಇತರೆ ವಾಹನ ಸವಾರರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ.
ಅಪಘಾತವಾದರೂ ಎದುರಿನಿಂದ ಬಂದ ವಾಹನ ನಿಲ್ಲಿಸದೆ ಪರಾರಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.