ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 MAY 2024
SAGARA : ಅಡಿಕೆ ಕಳ್ಳತನ (Adike Theft) ಪ್ರಕರಣಗಳು ಹೆಚ್ಚತ್ತಿದ್ದು ಬೆಳಗಾರರಲ್ಲಿ ಆತಂಕ ಉಂಟುಮಾಡಿದೆ. ಪೊಲೀಸ್ ಇಲಾಖೆ ಇನ್ನೆರಡು ದಿನಗಳಲ್ಲಿ ಅಡಿಕೆ ಕಳ್ಳರನ್ನು ಹಿಡಿಯದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಪ್ರಾಂತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ಎಚ್ಚರಿಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಚಂದ್ರ ಭಟ್, ಸಾಗರ, ಸೊರಬ, ಹೊಸನಗರ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಹೆಚ್ಚಾಗುತ್ತಿದೆ. ಬೆಳೆಗಾರರು ಜೀವ ಹಾಗೂ ಜೀವನ ಭದ್ರತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳಿಂದ ಕಳ್ಳತನ ಹೆಚ್ಚಿದ್ದು, ಬೆಳೆಗಾರರು ಅಡಿಕೆಯನ್ನು ಉಳಿಸಿಕೊಳ್ಳುವುದೇ ಸವಾಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಅಡಿಕೆ ಕಳ್ಳತನ ನಿಯಂತ್ರಣಕ್ಕೆ ಒತ್ತಾಯಿಸಿ ಸಂಘದಿಂದ ಸಾಗರ ಮತ್ತು ಶಿಕಾರಿಪುರ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಲಾಗಿತ್ತು. ಗ್ರಾಮೀಣ ಭಾಗದಲ್ಲಿ ಗಸ್ತು ಹೆಚ್ಚಿಸಲಾಗಿದೆ. ಆದರೂ ಸಾಗರ ತಾಲೂಕಿನ ಬಾಳಗೋಡು, ಮಿಟೆಕೊಪ್ಪ, ಬೇಳೂರು, ಮಡಸೂರು, ಸೊರಬದ ಮೂಡಗೋಡು, ನಿಸ್ರಾಣಿ ಸೇರಿದಂತೆ ವಿವಿಧೆಡೆ ಅಡಿಕೆ ಮೂಟೆಗಳನ್ನು ಕಳ್ಳತನವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ – ರಾಜ್ಯದಲ್ಲಿ ಕಡಿಮೆಯಾದ ಮಳೆ ಆರ್ಭಟ, ಮುಂಗಾರು ಕುರಿತು ಹೊರಬಿತ್ತು ಮಹತ್ವದ ಮಾಹಿತಿ
ಪ್ರಮುಖರಾದ ಈಳಿ ಶ್ರೀಧರ್, ಕೆ.ಎಸ್.ರಾಜೇಂದ್ರ, ವೆಂಕಟೇಶ್, ಎಂ.ಕೆ. ವೆಂಕಟೇಶ್, ಗಣೇಶ್, ಜಯಕುಮಾರ್, ನಾಗಾನಂದ ಹಾಜರಿದ್ದರು.
ಶಿವಮೊಗ್ಗ ಲೈವ್.ಕಾಂ