ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ಆಗುಂಬೆ ಘಾಟಿಯಲ್ಲಿ 12 ಟನ್ಗಿಂತಲೂ ಅಧಿಕ ತೂಕದ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿರುವ ಕಾರಣ ಭಾರೀ ವಾಹನ ಸಂಚಾರನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಎಷ್ಟು ದಿನ ನಿಷೇಧ?
ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಒಂದು ವೇಳೆ ಭಾರೀ ವಾಹನಗಳು ಘಾಟಿಯಲ್ಲಿ ಸಂಚರಿಸಿದರೆ, ಧರೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಇತರೆ ವಾಹನಗಳ ಸಂಚಾರವು ಕಷ್ಟವಾಗಲಿದೆ. ಹಾಗಾಗಿ 12 ಟನ್ಗಿಂತಲೂ ಅಧಿಕ ಭಾರದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಜೂನ್ 15ರಿಂದ ಅಕ್ಟೋಬರ್ 15ರವರೆಗೆ ಈ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪಾರ್ಯಾಯ ಮಾರ್ಗ ಯಾವುದು?
12 ಟನ್ಗಿಂತಲೂ ಅಧಿಕ ಭಾರದ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಪರ್ಯಾಯ ಮಾರ್ಗ 1
ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ ಮೂಲಕ ಮಂಗಳೂರು ತಲುಪಬಹುದಾಗಿದೆ.
ಪರ್ಯಾಯ ಮಾರ್ಗ 2
ಶಿವಮೊಗ್ಗದಿಂದ ತೀರ್ಥಹಳ್ಳಿ ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರದಿಂದ ಉಡುಪಿಗೆ ತಲುಪಬಹುದಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]