ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿತು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರೆ ಕಾರಣಿಕರ್ತರು. ಆದ್ದರಿಂದ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡುವ ಮೂಲಕ ಮುಂದಿನ ಪೀಳಿಗೆಗೆ ಅವರ ಸಾಧನೆ ಪರಿಚಯಿಸಬೇಕು. ಅವರ ಸಾಧನೆಗೆ ಈ ಮೂಲಕ ಗೌರವ ಸಮರ್ಪಣೆ ಮಾಡಿದಂತಾಗುತ್ತದೆ. ಹಾಗಾಗಿ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ. ಹೆಸರಿಡಬೇಕೆಂದು ಆಗ್ರಹಿಸಿದರು.
ಯಡಿಯೂರಪ್ಪ ಅವರು ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಮಾಡಿ, ವೈದ್ಯಕೀಯ ಕಾಲೇಜು, ಪಶು ವೈದ್ಯಕೀಯ ಕಾಲೇಜು, ಕೃಷಿ ವಿವಿ, ಫ್ರೀಡಂ ಪಾರ್ಕ್, ರೈಲ್ವೇ ಸ್ಟೇಷನ್, 100 ಅಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಪೂರ್ಣಗೊಳಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಅಭಿಮಾನಿ ಬಳಗದ ಪ್ರಮುಖರು ತಿಳಿಸಿದರು.
ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ್.ಜಿ.ಟಿ., ಕೆ.ಸಿ.ನಾಗರಾಜ್, ಆರ್.ಕೆ. ದೇವದಾಸ್, ಹೆಚ್. ರಾಜಶೇಖರ್, ಎಸ್.ಎಂ. ವೆಂಕಟೇಶ್, ರಾಜಯ್ಯ ಸೇರಿದಂತೆ ಹಲವರು ಇದ್ದರು.