ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪಚೋದನಾಕಾರಿ ಹೇಳಿಕೆಗಳನ್ನು ಹಾಕುವವರ ಮತ್ತು ಫಾರ್ವರ್ಡ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್, ವಾಟ್ಸ್ಆ್ಯಪ್, ಟ್ವಿಟರ್ ಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆ ವಹಿಸುವುದು ಹಾಗೂ ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]