ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022
ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಆರ್. ಸೆಲ್ವಮಣಿ ಅವರು ಅಧಿಕಾರ ಸ್ವೀಕರಿಸಿದರು. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಅವರನ್ನು ಶಿವಮೊಗ್ಗ ಡಿಸಿಯಾಗಿ ಮಂಗಳವಾರ ವರ್ಗಾವಣೆ ಮಾಡಲಾಗಿತ್ತು.
ಈವರೆಗೆ ಶಿವಮೊಗ್ಗ ಡಿಸಿಯಾಗಿದ್ದ ಕೆ.ಬಿ.ಶಿವಕುಮಾರ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ.
ಮೂರು ಪ್ರಮುಖಾಂಶ
- 1986ರಲ್ಲಿ ಜನಿಸಿದ ಡಾ. ಆರ್.ಸೆಲ್ವಮಣಿ 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮೂಲತಃ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯವರು.
- ಮಂಗಳೂರು ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಕೆಲವು ತಿಂಗಳ ಹಿಂದಷ್ಟೇ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
- ಇದೀಗ ವರ್ಷದಲ್ಲಿ ಎರಡನೇ ಬಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.