ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ.
ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ.
ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.