SHIVAMOGGA LIVE NEWS | 16 ಮಾರ್ಚ್ 2022
ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಯಾವುದ ಪರ್ಯಾಯ ಮಾರ್ಗ?
ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್ಗಳು, ಕಾರು, ಟ್ಯಾಕ್ಸಿ ಮತ್ತು ಲಘು ವಾಹನಗಳು ಕಡದಕಟ್ಟೆ ವಿದ್ಯಾಧಿರಾಜ ಸಭಾಭವನ ಪಕ್ಕದ ರಸ್ತೆಯಿಂದ ಹೆಬ್ಬಂಡಿ ಮಾರ್ಗವಾಗಿ ಲಕ್ಷ್ಮಿಪುರ ಹಾಗೂ ಬಿಳಕಿ ಕ್ರಾಸ್ ಮೂಲಕ ಸಂಚರಿಸಬೇಕು.
ಎಲ್ಲಾ ರೀತಿಯ ಭಾರೀ ವಾಹನಗಳು ಉಂಬ್ಳೆಬೈಲ್ ರಸ್ತೆ ಮೂಲಕ-ಕೃಷ್ಣಪ್ಪ ವೃತ್ತ-ಸಿದ್ದಾಪುರ ಸರ್ಕಲ್-ಬಿಳಕಿ ಕ್ರಾಸ್ ಮುಖಾಂತರ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200