ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021
ಕರೋನ ಎರಡನೇ ಅಲೆ, ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಆಂಬುಲೆನ್ಸ್ ಜಾಗೃತಿ ಜಾಥಾ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಂಬುಲೆನ್ಸ್ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು.
ಜಾಗೃತಿ ಸಂದೇಶ, ಸೈರನ್
ಶಿವಮೊಗ್ಗ ನಗರದ ಪ್ರಮುಖ ಕಡೆ ಜಾಗೃತಿಗೆ ಆಂಬುಲೆನ್ಸ್ಗಳು ಸಂಚರಿಸಲಿವೆ. ಸೈರನ್ ಹಾಕಿಕೊಂಡು ಆಂಬುಲೆನ್ಸ್ಗಳು ಸಂಚರಿಸಲಿದ್ದು, ಜನರನ್ನು ತಮ್ಮತ್ತ ಸೆಳೆಯುತ್ತವೆ. ಮತ್ತೊಂದೆಡೆ ಆಟೋದಲ್ಲಿ ಜಾಗೃತಿ ಸಂದೇಶದ ಮಾಹಿತಿಗಳನ್ನು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.
ಆಂಬುಲೆನ್ಸ್ ಜಾಥಾದ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]