ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ರೈತ ವಿರೋಧ ಕಾಯ್ದೆಗಳ ವಿರುದ್ಧ ಸಂಯುಕ್ತ ಕಿಸಾನ್ ಮಂಚ್ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆ ವಿನೋಬನಗರದಲ್ಲಿರುವ ಶಿವಮೊಗ್ಗ ಎಪಿಎಂಸಿ ತರಕಾರಿ ಮಾರುಕಟ್ಟೆ ಬಂದ್ ಮಾಡಲಾಗಿದೆ.
ಇಲ್ಲಿನ ವ್ಯಾಪಾರಿಗಳು ಬಂದ್’ಗೆ ಬೆಂಬಲ ಸೂಚಿಸಿರುವುದರಿಂದ ಎಪಿಎಂಸಿ ಗೇಟನ್ನು ಬೆಳಗ್ಗೆಯಿಂದ ಬಂದ್ ಮಾಡಲಾಗಿದೆ. ಬೆಳಗ್ಗೆಯಿಂದಲೇ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ರೈತರ ಪರವಾಗಿ ಬೆಂಬಲ ಘೋಷಿಸಿದ್ದಾರೆ.
ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆಯಿಂದ ಈ ತರಕಾರಿ ಮಾರುಕಟ್ಟೆಗೆ ರೈತರ ಬೆಳೆದ ಬೆಳೆ ಬರುತ್ತಿದ್ದವು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200