ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು.
ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.
ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]