ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MAY 2021
ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಮುಂದೆಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಪ್ರಕರಣ ದಾಖಲಾಗಿದೆ.
ಹಲ್ಲೆಗೆ ಕಾರಣವೇನು?
ಕೌಟುಂಬಿಕ ವಿಚಾರ ಸಂಬಂಧ ಶಾಸಕ ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಪಂಚಾಯಿತಿ ನಡೆಸಲಾಗಿತ್ತು. ಇದನ್ನು ಮುಗಿಸಿ ಹೊರ ಬರುತ್ತಿದ್ದಂತೆ ಕಾರಿನಲ್ಲಿ ಬಂದ ಕಿರಣ್ ಎಂಬಾತ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನು ಗಮನಿಸಿದ ಬಿ.ಎಸ್.ಗಣೇಶ್ ಮತ್ತು ನಜರುಲ್ಲಾ ಅವರು ಗಲಾಟೆ ಬಿಡಿಸಿದ್ದಾರೆ. ಹಲ್ಲೆಗೊಳಗಾದ ಚಂದ್ರೇಗೌಡ ಅವರು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.
ಹಲ್ಲೆ ಸಂಬಂಧ ಕಿರಣ್, ಮೀನಾಕ್ಷಿ, ಕಲಾವತಿ ಎಂಬುವವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]