ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷ ಸಾಗರದಲ್ಲೂ ತಾರಕಕ್ಕೇರಿದೆ. ಶಾಸಕ ಹರತಾಳು ಹಾಲಪ್ಪ ಅವರ ಎದುರಲ್ಲೇ ವಿದ್ಯಾರ್ಥಿಗಳು ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಘಟನೆ ಸಂಭವಿಸಿದೆ. ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ, ವಿದ್ಯಾರ್ಥಿಗಳು ಉಪ ವಿಭಾಗಾಧಿಕಾರಿ ಕಚೇರಿ ಬಳಿಗೆ ಬಂದಿದ್ದರು. ಈ ಸಂದರ್ಭ ಯುವಕರ ಗುಂಪು, ಓರ್ವ ಯುವಕನಿಗೆ ಥಳಿಸಿದ್ದಾರೆ.
ಈ ವೇಳೆ ಶಾಸಕ ಹರತಾಳು ಹಾಲಪ್ಪ ಅವರು ಹಲ್ಲೆ ನಡೆಸದಂತೆ ತಿಳಿಸಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ
Shimoga District Profile | About Shivamogga Live | Shivamogga Live Whatsapp Number 7411700200