ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021
ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು.
ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು.
ಪ್ರತಿಭಾ ಪುರಸ್ಕಾರ
ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್ ಅವರು ಸಾಧಕರನ್ನು ಸನ್ಮಾನಿಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಟಿಎನ್ ಸಿ ಹಳೆ ವಿದ್ಯಾರ್ಥಿ ಬಳಗದ ಉಪಾಧ್ಯಕ್ಷ ಕೇಶವಮೂರ್ತಿ, ಎಟಿಎನ್’ಸಿ ಕಾಲೇಜು ಪ್ರಾಂಶುಪಾಲ ಪ್ರೊ. ಹೆಚ್.ಎಂ.ಸುರೇಶ್ ಉಪಸ್ಥಿತರಿದ್ದರು.
ವಾಣಿಜ್ಯ ನಿಕಾಯದ ಮುಖ್ಯಸ್ಥ ಪ್ರೊ. ಆರ್.ಜಗದೀಶ್, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಕೆ.ಎಂ.ನಾಗರಾಜು,ಎನ್ಎಸ್ಎಸ್ ವಿಭಾಗದ ಪ್ರೊ. ಎಸ್.ಜಗದೀಶ್, ಐಕ್ಯೂಎಸಿ ಪ್ರೊ. ಖಾಜೀಂ ಷರೀಫ್, ಉಪನ್ಯಾಸಕರಾದ ಸತಿ ಭಾರತಿ, ಪ್ರವೀಣ್ ಬಿ.ಎನ್, ಪ್ರೊ. ಶ್ರೀಲಲಿತಾ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200