SHIVAMOGGA LIVE NEWS | SHIMOGA | 15 ಜೂನ್ 2022
ಜಗಳವಾಡುತ್ತಿದ್ದವರನ್ನು ವಿಚಾರಣೆ ಮಾಡಲು ತೆರಳಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೆ ವ್ಯಕ್ತಿಯೊಬ್ಬ ದಾಳಿ ಮಾಡಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ATTACK
ವಿನೋಬನಗರ ಠಾಣೆ ಪೊಲೀಸ್ ಠಾಣೆ ಸಿಬ್ಬಂದಿ ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಏನಿದು ಪ್ರಕರಣ?
ಶಿವರಾಮ್ ಅವರು ಇ.ಆರ್.ಎಸ್.ಎಸ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೊಮ್ಮನಕಟ್ಟೆ ಬಳಿ ಗಲಾಟೆ ಆಗುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇ.ಆರ್.ಎಸ್.ಎಸ್ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು.
ಶಮಂತನಾಯ್ಕ್ ಎಂಬಾತ ಹರೀಶ್ ಎಂಬುವವರ ಮನೆ ಬಳಿ ಜಗಳವಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯರು ಜಗಳ ಬಿಡಿಸಿದ್ದಾರೆ. ಜಗಳವಾಡಲು ಕಾರಣವೇನು ಎಂದು ಶಿವರಾಮ್ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಶಮಂತನಾಯ್ಕ್, ಶಿವರಾಮ್ ಅವರ ಕಣ್ಣಿನ ಬಳಿ ಪರಚಿ ಪರಾರಿಯಾಗಿದ್ದಾನೆ.
ಶಿವರಾಮ್ ಅವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಶಮಂತನಾಯ್ಕ್ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಕಾರು, ಬೈಕ್ ಅಪಘಾತ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.