SHIVAMOGGA LIVE NEWS | 13 JANUARY 2023
SHIMOGA : ಹುಟ್ಟುಹಬ್ಬದ ಪಾರ್ಟಿ (birthday party) ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಏನಿದು ಘಟನೆ?
ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು (birthday party) ಶಿವಮೊಗ್ಗದ ಸೋಷಿಯಲ್ ಹಾರ್ಬರ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು ಆರಂಭಿಸಿದೆ. ಬಿಯರ್ ಬಾಟಲಿಯಿಂದ ಹೊಡೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ಕೇಸ್, ಹೊನ್ನಾಳಿ, ಮಂಗಳೂರಿನ ಇಬ್ಬರು ಅರೆಸ್ಟ್
ಸಾಗರ, ನಾಗ ಪವನ್, ತೇಜಸ್ ಅವರು ಜಗಳ ಬಿಡಿಸಲು ಹೋದಾಗ ಅವರ ಮೇಲೂ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಲಾಗಿದೆ. ಗಾಯಗೊಂಡಿದ್ದ ನಾಲ್ವರು ಅಲ್ಲಿಂದ ತಪ್ಪಿಸಿಕೊಂಡು, ತಮ್ಮ ಕಾರಿನಲ್ಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಪಾರ್ಟಿಯಲ್ಲಿದ್ದ ಆರೇಳು ಮಂದಿ ತಮ್ಮ ಮೇಲೆ ಹಲ್ಲೆ ನೆಡಸಿದ್ದಾರೆ ಎಂದು ಆರೋಪಿಸಿ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.