ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ದಂತ ವೈದ್ಯರೊಬ್ಬರ ಮೇಲೆ ಶಿವಮೊಗ್ಗದ ದುರ್ಗಿಗುಡಿಯಲ್ಲಿ ಹಲ್ಲೆ ನಡೆಸಲಾಗಿದೆ. ದೊಣ್ಣೆಯಿಂದ ಅವರ ಕಾರಿನ ಗಾಜು ಒಡೆದು ಹಾಕಲಾಗಿದೆ.
ಕೆಲಸ ಮುಗಿಸಿ ರಾತ್ರಿ ದಂತ ವೈದ್ಯರೊಬ್ಬರು ಕಾರು ತಂದು ಮನೆ ಬಳಿ ನಿಲ್ಲಿಸಿ ನಡೆದು ಹೋಗುತ್ತಿದ್ದರು. ಈ ಸಂದರ್ಭ ಸಮೀಪದ ಮನೆಯ ವ್ಯಕ್ತಿಯೊಬ್ಬರು ವೈದ್ಯರನ್ನು ತಡೆದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ನಾಯಿಯನ್ನು ತಮ್ಮ ಮನೆ ಬಳಿ ಕಟ್ಟದಂತೆ ಎಚ್ಚರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ ದೊಣ್ಣೆ ಒಂದರಿಂದ ವೈದ್ಯರ ಕಾರಿನ ಹಿಂಬದಿಯ ಗ್ಲಾಸ್ ಒಡೆದು ಹಾಕಿದ್ದಾರೆ. ಘಟನೆ ಸಂಬಂಧ ವೈದ್ಯರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.