ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಸೆಪ್ಟೆಂಬರ್ 2019
ಕಸ್ತೂರಬಾ ಕಾಲೇಜು ಮುಂಭಾಗ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೈ ಮತ್ತು ಬೆನ್ನಿಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸುಮನ್ ಗಾಯಗೊಂಡಿರುವ ಯುವಕ. ಮಂಗಳವಾರ ರಾತ್ರಿ ಸುಮನ್ ಬೈಕ್’ನಲ್ಲಿ ತೆರಳುತ್ತಿದ್ದಾಗ, ಕಸ್ತೂರಬಾ ಕಾಲೇಜು ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎರಡು ಬೈಕ್’ನಲ್ಲಿ ಹಿಂದಿನಿಂದ ಬಂದು ಅಟ್ಯಾಕ್ ಮಾಡಲಾಗಿದೆ.
ಸುಮನ್ ಎಡಗೈಗೆ ಗಂಭೀರ ಗಾಯವಾಗಿದೆ. ಬೆನ್ನಿನ ಮೇಲು ತರಚಿದ ಗಾಯವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಮನ್, ‘ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಘೋಷಣೆ ಕೂಗಿಸಿದ್ದ ವಿಚಾರವಾಗಿ ಕೆಲವರು ದಾಳಿ ನಡೆಸಿದ್ದಾರೆ’ ಎಂದು ತಿಳಿಸಿದ್ದಾನೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
U are will be helping all shivamogga people’s