ಶಿವಮೊಗ್ಗ ಲೈವ್.ಕಾಂ | 20 ಮಾರ್ಚ್ 2019
ನೂರು ಡಿ.ಕೆ.ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಅಂತಾ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭರವಸೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಅವರ ಶಿಷ್ಯರಾಗಿರುವುದರಿಂದ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಅಂತಾ ಹೇಳಲಾಗುತ್ತಿದೆ. ಆದರೆ ಇದೇ ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪ ಅವರ ವಿರುದ್ಧ ಭದ್ರಾವತಿಯಲ್ಲಿ ಚುನಾವಣ ಪ್ರಚಾರ ನಡೆಸಿದ್ದರು ಎಂದರು.
ಇನ್ನು, ಡಿ.ಕೆ.ಶಿವಕುಮಾರ್ ಅವರು ಹಲವರಿಗೆ ಶಿಷ್ಯರಾಗಿದ್ದಾರೆ. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಕತ್ತಿಗೆ ಮಚ್ಚು ಇಟ್ಟಿದ್ದ ವ್ಯಕ್ತಿಗೂ ಡಿ.ಕೆ.ಶಿವಕುಮಾರ್ ಶಿಷ್ಯರಾಗಿದ್ದಾರೆ ಎಂದು ಆರೋಪಿಸಿದರು. ಅಷ್ಟಕ್ಕೂ, ಆಯನೂರು ಮಂಜುನಾಥ್ ಹೇಳಿದ್ದೇನು? ಕೆಳಗಿರುವ ವಿಡಿಯೋ ನೋಡಿ..
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]