SHIVAMOGGA LIVE NEWS | 19 APRIL 2023
BENGALURU : ಆಯನೂರು ಮಂಜುನಾಥ್ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate). ಇವತ್ತು ಮೂರನೆ ಪಟ್ಟಿ ಪ್ರಕಟವಾಗಲಿದೆ. ಸುಮಾರು 70 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಆಯನೂರು ಮಂಜುನಾಥ್ ಅವರು ಇವತ್ತು ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದರು.
ಇದನ್ನೂ ಓದಿ – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ