ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಲ್ಲೆ ಆಗಿದ್ದು ಎಲ್ಲಿ? ಏಕೆ?
ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ಬಜರಂಗದಳ ಸಹ ಸಂಚಾಲಕ ನಾಗೇಶ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಬೆಳಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಮಾಡಲು ಬರುತ್ತಿದ್ದಾಗ ಹಲ್ಲೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಯಾಗಿದ್ದು ಹೇಗೆ?
ನಾಗೇಶ್ ಬೈಕ್ನಲ್ಲಿ ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಗೇಶ್ ಮೂಗಿನ ಮೇಲೆ ಗಂಭೀರವಾಗಿ ಗಾಯವಾಗಿದೆ. ಹಲ್ಲೆಯಾಗುತ್ತಿದ್ದಂತೆ ನಾಗೇಶ್ ತಪ್ಪಿಸಿಕೊಂಡಿದ್ದು, ಸ್ನೇಹಿತರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆ ಮುಂದೆ ಕಾರ್ಯಕರ್ತರ ದಂಡು
ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಸಂಘಟನೆ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿದರು. ನಾಗೇಶ್ ಆರೋಗ್ಯ ಸ್ಥಿತಿ ವಿಚಾರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆ ಆಗಿದ್ದರಿಂದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]