ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 APRIL 2023
SHIMOGA : ಬಾಳೆಬರೆ ಘಾಟ್ ಎರಡು ಭಾಗದಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಏ.15ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನಗಳಿಗೆ (Vehicle) ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟಿಯಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಇನ್ನೂ ಹೆಚ್ಚುವರಿ ಹತ್ತು ದಿನ ವಿಸ್ತರಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು (Vehicle) ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ..
ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.
ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.
ಇದನ್ನೂ ಓದಿ – ಕಾರಿನಲ್ಲಿ ರಾಶಿ ರಾಶಿ ಬಿಯರ್ ಬಾಟಲ್, ಟಿನ್, ಕೇಸ್ ದಾಖಲು, ಈತನಕ ಎಲ್ಲೆಲ್ಲಿ ಎಷ್ಟು ಮದ್ಯ ಸೀಜ್ ಆಗಿದೆ?
ಶಿವಮೊಗ್ಗ ಲೈವ್.ಕಾಂ