SHIVAMOGGA LIVE NEWS | 3 FEBRUARY 2023
SHIMOGA : ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್ ನಲ್ಲಿ (Balebare Ghat Road) ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಯಾವೆಲ್ಲ ಬದಲಿ ಮಾರ್ಗ?
ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು. ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು. (Balebare Ghat Road)
ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬೇಕು.
ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳಿಗು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಈ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಬೇಕು.