ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಶಾಲೆ ಮಕ್ಕಳನ್ನು ಮಾಧ್ಯಮದ ವರದಿಗಾರರು ಅಪರಾಧಿಗಳ ಹಾಗೆ ಬಿಂಬಿಸುತ್ತಿದ್ದಾರೆ. ಹಾಗಾಗಿ ಮಾಧ್ಯಮ ಪ್ರತಿನಿಧಿಗಳು ಶಾಲೆ ಆವರಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು SDPI ಜಿಲ್ಲಾ ಘಟಕ ಆಗ್ರಹಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ SDPI ಕಾರ್ಯಕರ್ತರು, ಮಾಧ್ಯಮದವರು ಶಾಲೆ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಅಪರಾಧಿಗಳ ಹಾಗೆ ಚಿತ್ರಿಸಿ ಪ್ರಸಾರ ಮಾಡುತ್ತಿದ್ದಾರೆ. ಇದಕ್ಕೆ ತಡೆಯೊಡ್ಡಬೇಕು ಎಂದು ಮನವಿ ಮಾಡಿದರು.
ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಕಾಲೇಜುಗಳಿಗೆ ಅನ್ವಯವಾಗಲಿದೆ. ಅದನ್ನು ಶಾಲೆ ಮಕ್ಕಳ ಮೇಲೆ ಅನ್ವಯಿಸಲು ಮುಂದಾಗಿರುವುದು ಸರಿಯಲ್ಲ. ಶಾಲೆ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದರು.