SHIVAMOGGA LIVE NEWS | 23 DECEMBER 2023
SHIMOGA : ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣವಾಗಿದೆ. ಡಿ.26ರಂದು ಸ್ಮಾರಕ ಲೋಕಾರ್ಪಣೆ ಮತ್ತು ಬಂಗಾರಪ್ಪ ಸವಿ ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಟ ಮತ್ತು ಬಂಗಾರಪ್ಪ ವಿಚಾರ ವೇದಿಕೆ ಪ್ರಮುಖರಾದ ನಾಗರಾಜ ಮೂರ್ತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ಮೂರ್ತಿ, ಅಂದು ಸಂಜೆ 4.30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗವಹಿಸಲಿದ್ದಾರೆ. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಉಪಸ್ಥಿತರಿರಲಿದ್ದಾರೆ. ಬಂಗಾರಪ್ಪ ಫೌಂಡೇಶನ್, ಎಸ್.ಬಂಗಾರಪ್ಪ ವಿಚಾರ ವೇದಿಕೆ ಮತ್ತು ಬಂಗಾರಪ್ಪ ಅಭಿಮಾನಿಗಳು ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ.ಮಂಜುನಾಥ್, ಗೋಪಾಲಕೃಷ್ಣ, ಶಮಂತ, ಗಿರೀಶ್ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ತಾಳಗುಪ್ಪ ಎಕ್ಸ್ಪ್ರೆಸ್ ಸೇರಿ 19 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲುಗಳು?